ಮುಡಾ ಗಬ್ಬೆದ್ದು ನಾರ್ತಾ ಇದೆ, ನಾನದನ್ನ ಕ್ಲೀನ್‌ ಮಾಡ್ತಾ ಇದೀನಿ: ಸಿಎಂ ಸಿದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಡಾ ಗೆಬ್ಬೆದ್ದು ನಾರುತ್ತಿದೆ, ಅದನ್ನ ಕ್ಲೀನ್ ಮಾಡುವ ಕೆಲಸ ಮಾಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಡಾ ಹಗರಣದ ಬಗ್ಗೆ ಇಬ್ಬರು ಐಎಎಸ್ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ‌. ತನಿಖಾ ವರದಿ ಬಂದ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇನೆ. ನಮ್ಮ ಕಾಲದಲ್ಲೂ ತಪ್ಪುಗಳು ಆಗಿದೆ. ಬಿಜೆಪಿ ಕಾಲದಲ್ಲೇ ಹೆಚ್ಚು ತಪ್ಪಾಗಿರುವುದು. ಅದನ್ನ ಸರಿಪಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಹೊಟ್ಟೆಕಿಚ್ಚಿನಿಂದ ಕೆಲವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನನ್ನ ಮೇಲೆ ಆರೋಪ ಮಾಡಲು ಬೇರೆ ಏನೂ ಇಲ್ಲ. ಹೀಗಾಗಿ ಕಾನೂನಾತ್ಮಕವಾಗಿ ನಡೆದಿರುವ ವಿಚಾರವನ್ನ ಅಕ್ರಮ ಎಂದು ಬಿಂಬಿಸುವ ಯತ್ನ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ನಾನು ಹೆದರುತ್ತೀನಾ? ಇದರಿಂದ ನನ್ನನ್ನು ಹೆದರಿಸಲು ಸಾಧ್ಯನಾ ಎಂದು ಸಿಎಂ ಪ್ರಶ್ನಿಸಿದ್ದಾರೆ

ಪತ್ನಿಗೆ ಸೈಟ್ ಕೊಟ್ಟಿರುವ ವಿಚಾರವಾಗಿ ಪ್ರತಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮದು ಅಕ್ರಮವೇ ಅಲ್ಲ. ಆ ಪ್ರಕರಣವೇ ಬೇರೆ, ಈಗ ನಡೆದಿರುವ ಪ್ರಕರಣಗಳೇ ಬೇರೆ ಎಂದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ನನ್ನ ಪತ್ನಿಗೆ ಸೈಟ್​ ಕೊಟ್ಟಿದ್ದು. ಅವರು ನನ್ನನ್ನು ಕೇಳಿ ಸೈಟ್ ಕೊಟ್ಟಿದ್ದಾರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!