ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಜ್ಯಕ್ಕೆ ಮತ್ತೊಮ್ಮೆ ಪ್ರಧಾನಿ ಮೋದಿ ಆಗಮಿಸುತ್ತಿದ್ದು, ಏಪ್ರಿಲ್ 9ರಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರದಿಂದ (ಏಪ್ರಿಲ್ 6) ಏಪ್ರಿಲ್ 9ರ ವರೆಗೆ ಬಂಡೀಪುರದಲ್ಲಿ ಸಫಾರಿಗೆ ಪ್ರವೇಶ ನಿಷೇಧಿಸಲಾಗಿದೆ.
ಅದಲ್ಲದೆ ಗುರುವಾರದಿಂದ ಏ.9ರ ವರೆಗೆ ಬಂಡೀಪುರ ವ್ಯಾಪ್ತಿಯ ಎಲ್ಲ ಹೋಂ ಸ್ಟೇಗಳು, ರೆಸಾರ್ಟ್ ಗಳು ಮತ್ತು ಲಾಡ್ಜ್ ಗಳು ಕೂಡ ಬಂದ್ ಆಗಲಿವೆ.
ಪ್ರಧಾನಿಯವರ ಭದ್ರತೆ, ರಸ್ತೆ ನಿರ್ವಹಣೆ ಹಾಗೂ ಭೇಟಿಯ ಪೂರ್ವ ಸಿದ್ಧತೆ ಕೈಗೊಳ್ಳಬೇಕಾಗಿರುವುದರಿಂದ ಸಫಾರಿಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ, ಹೋಂ ಸ್ಟೇ, ರೆಸಾರ್ಟ್ ಗಳು ಹಾಗೂ ಲಾಡ್ಜ್ ಗಳ ಕಾಯ್ದಿರಿಸುವಿಕೆ, ತಂಗುವಿಕೆಯನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಆದೇಶ ಪ್ರಕಟಿಸಿದ್ದಾರೆ.
ಪ್ರಧಾನಿಯವರ ಭದ್ರತೆ ಹೊಣೆ ಹೊತ್ತಿರುವ ಎಸ್ಪಿಜಿ ತಂಡ ಗುಂಡ್ಲುಪೇಟೆಗೆ ಈಗಾಗಲೆ ಬಂದಿದೆ.