ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿ 12 ವರ್ಷಕ್ಕೊಮ್ಮೆ ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ಮಹಾ ಕುಂಭಮೇಳ ನಡೆಯುತ್ತದೆ. ಜನವರಿ 10 ರಿಂದ ಫೆ.28 ಮಹಾ ಕುಂಭಮೇಳದ ಹಿನ್ನೆಲೆಯಲ್ಲಿ ಐಆರ್ಸಿಟಿಸಿಯು (ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ) ಪ್ರಯಾಗರಾಜ್ನಲ್ಲಿ ಟೆಂಟ್ ಸಿಟಿ ನಿರ್ಮಾಣ ಮಾಡಿದೆ ಎಂದು ಐಆರ್ಸಿಟಿಸಿ ಟೂರಿಸಂ ಕಾರ್ಪೊರೇಷನ್ ಮೇಲ್ವಿಚಾರಕರಾದ ಹರ್ಷದೀಪ್ ಹಾಗೂ ನವೀನ್ ಅವರು ಮಾಹಿತಿ ನೀಡಿದ್ದಾರೆ.
ಮಹಾ ಕುಂಭಮೇಳವು ನಾಲ್ಕು ಪವಿತ್ರ ಸ್ಥಳಗಳಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ನಡೆಸುವ ಹಿಂದೂಗಳ ತೀರ್ಥಯಾತ್ರೆಯಾಗಿದೆ. ಹೀಗಾಗಿ, ಈ ಬಾರಿ ಪ್ರಯಾಗ್ರಾಜ್ಗೆ ಲಕ್ಷಾಂತರ ಜನ ಬರುತ್ತಾರೆ. ಸಂಗಮದಲ್ಲಿ ಸ್ನಾನ ಮಾಡಿ ಪಾಪ ನಿವಾರಣೆಯಾಗಿ ಮೋಕ್ಷ ಪ್ರಾಪ್ತಿಗಾಗಿ ಪ್ರಾರ್ಥಿಸುತ್ತಾರೆ. ಅಲ್ಲಿಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಐಆರ್ಸಿಟಿಸಿ ಸುಸಜ್ಜಿತವಾದ ಅತ್ಯಾಧುನಿಕ ಟೆಂಟ್ ನಿರ್ಮಿಸಿ ವಸತಿ ವ್ಯವಸ್ಥೆ ಕಲ್ಪಿಸಿದೆ. ಎರಡು ವಿಧದ ಟೆಂಟ್ ವ್ಯವಸ್ಥೆ ಇದ್ದು, ಅದಕ್ಕೆ ತಕ್ಕಂತೆ ದರ ನಿಗದಿ ಪಡಿಸಲಾಗಿದೆ. ಬೆಳಗಿನ ಉಪಹಾರ, ಭೋಜನವೂ ಇದರಲ್ಲಿ ಒಳಗೊಂಡಿದೆ ಎಂದು ತಿಳಿಸಿದ್ದಾರೆ.
