ಸಚಿವ ಸಂಪುಟದಿಂದ ಕೆ.ಎನ್ ರಾಜಣ್ಣ ವಜಾಗೊಳಿಸಿ: ರಾಜ್ಯಪಾಲರಿಂದ ಅಧಿಕೃತ ಆದೇಶ ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಾಸಕ ಕೆಎನ್​ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಈ ಬಗ್ಗೆ ರಾಜಭವನದಿಂದ ಸರ್ಕಾರಕ್ಕೆ ಅಧಿಕೃತ ಪತ್ರ ರವಾನಿಸಲಾಗಿದೆ.

ಸಚಿವ ಕೆಎನ್​ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್​. ಪ್ರಭುಶಂಕರ್​ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​ ಅವರಿಗೆ ಪತ್ರ ಬರೆದಿದ್ದಾರೆ. ಕೆಎನ್​ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜಭವನದಿಂದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಹೋಗಿದೆ.

‘ಮುಂದಿನ ಅಗತ್ಯ ಕ್ರಮಕ್ಕಾಗಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಹಾಕುವ ಕುರಿತು ರಾಜ್ಯಪಾಲರು ಸಹಿ ಮಾಡಿದ ಮೂಲ ಅಧಿಸೂಚನೆಯನ್ನು ಈ ಪತ್ರದೊಂದಿಗೆ ಕಳುಹಿಸಲು ನನಗೆ ನಿರ್ದೇಶಿಸಲಾಗಿದೆ’ಎಂದು ಪತ್ರದಲ್ಲಿದೆ.

ಹೈಕಮಾಂಡ್​ ಸೂಚನೆ ನೀಡಿದ ಬೆನ್ನಲ್ಲೇ ಶಾಸಕ ಕೆಎನ್​ ರಾಜಣ್ಣ ಅವರು ಸೋಮವಾರ (ಆ.11) ಮಧ್ಯಾಹ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಕೆ.ಎನ್.ರಾಜಣ್ಣ ನೀಡಿದ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗೀಕರಿಸಿ, ರಾಹ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅವರಿಗೆ ಕಳುಹಿಸಿದರು. ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅವರು ಕೆಎನ್​ ರಾಜಣ್ಣ ರಾಜೀನಾಮೆಯನ್ನು ಅಂಗೀಕರಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!