ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನೂತನ ಸಚಿವ ಸಂಪುಟ ರಚನೆಯಾದ ಬಳಿಕ ಯಾವ ಜಿಲ್ಲೆಗೆ ಯಾರು ಉಸ್ತುವಾರಿ ಸಚಿವರಾಗುತ್ತಾರೆ ಎಂಬ ಪ್ರಶ್ನೆ ಇತ್ತು. ಈ ಕುರಿತು ಸಾಕಷ್ಟು ಚರ್ಚೆಗಳು ಕೂಡ ನಡೆಯುತ್ತಿತ್ತು. ಇದೀಗ ಜಿಲ್ಲಾ ಉಸ್ತುವಾರಿ ಚಿವರನ್ನು ನೇಮಕ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಅಧಿಕೃತವಾಗಿ ಬಿಡುಗಡೆಯಾಗಿದ್ದು,
ಯಾವ ಜಿಲ್ಲೆಯ ಜವಾಬ್ದಾರಿ ಯಾರ ಹೆಗಲಿಗೆ ಬಿದ್ದಿದೆ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಕೆಳಗಿನಂತಿದೆ.
ಯಾವ ಜಿಲ್ಲೆಗೆ ಯಾರು ಉಸ್ತುವಾರಿ?
- ಬೆಂಗಳೂರು ನಗರ ಉಸ್ತುವಾರಿ ಸಚಿವ- ಡಿ.ಕೆ.ಶಿವಕುಮಾರ್
 - ತುಮಕೂರು ಜಿಲ್ಲಾ ಉಸ್ತುವಾರಿ-ಡಾ.ಜಿ.ಪರಮೇಶ್ವರ್
 - ಗದಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಹೆಚ್.ಕೆ.ಪಾಟೀಲ್
 - ಬೆಂಗಳೂರು ಗ್ರಾಮಾಂತರ-ಕೆ.ಹೆಚ್.ಮುನಿಯಪ್ಪ
 - ರಾಮಲಿಂಗಾರೆಡ್ಡಿ-ರಾಮನಗರ
 - ಕೆ.ಜೆ.ಜಾರ್ಜ್-ಚಿಕ್ಕಮಗಳೂರು
 - ಎಂ.ಬಿ.ಪಾಟೀಲ್-ವಿಜಯಪುರ
 - ದಿನೇಶ್ ಗುಂಡೂರಾವ್-ದಕ್ಷಿಣ ಕನ್ನಡ
 - ಹೆಚ್.ಸಿ.ಮಹದೇವಪ್ಪ-ಮೈಸೂರು
 - ಸತೀಶ್ ಜಾರಕಿಹೊಳಿ-ಬೆಳಗಾವಿ
 - ಪ್ರಿಯಾಂಕ್ ಖರ್ಗೆ-ಕಲಬುರಗಿ
 - ಶಿವಾನಂದಪಾಟೀಲ್-ಹಾವೇರಿ
 - ಜಮೀರ್ ಅಹ್ಮದ್ ಖಾನ್-ವಿಜಯನಗರ
 - ಶರಣಬಸಪ್ಪ ದರ್ಶನಾಪುರ-ಯಾದಗಿರಿ
 - ಈಶ್ವರ್ ಖಂಡ್ರೆ-ಬೀದರ್
 - ಚಲುವರಾಯಸ್ವಾಮಿ-ಮಂಡ್ಯ
 - ಎಸ್.ಎಸ್.ಮಲ್ಲಿಕಾರ್ಜುನ್-ದಾವಣಗೆರೆ
 - ಸಂತೋಷ್ ಲಾಡ್-ಧಾರವಾಡ
 - ಶರಣಪ್ರಕಾಶ್ ಪಾಟೀಲ್-ರಾಯಚೂರು
 - ಆರ್.ಬಿ.ತಿಮ್ಮಾಪುರ-ಬಾಗಲಕೋಟೆ
 - ಕೆ.ವೆಂಕಟೇಶ್-ಚಾಮರಾಜನಗರ
 - ಕೊಪ್ಪಳ-ಶಿವರಾಜ್ ತಂಗಡಗಿ
 - ಡಿ.ಸುಧಾಕರ್-ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ
 - ಬಿ.ನಾಗೇಂದ್ರ-ಬಳ್ಳಾರಿ
 - ಕೆ.ಎನ್.ರಾಜಣ್ಣ-ಹಾಸನ
 - ಭೈರತಿ ಸುರೇಶ್-ಕೋಲಾರ
 - ಲಕ್ಷ್ಮೀ ಹೆಬ್ಬಾಳ್ಕರ್-ಉಡುಪಿ
 - ಮಂಕಾಳ್ ವೈದ್ಯ-ಉತ್ತರ ಕನ್ನಡ
 - ಮಧು ಬಂಗಾರಪ್ಪ-ಶಿವಮೊಗ್ಗ
 - ಡಾ.ಎಂ.ಸಿ.ಸುಧಾಕರ್-ಚಿಕ್ಕಬಳ್ಳಾಪುರ
 - ಎನ್.ಎಸ್.ಬೋಸರಾಜು-ಕೊಡಗು
 
