ಹೊಸದಿಗಂತ ಡಿಜಿಟಲ್ ಡೆಸ್ಕ್:
ನನ್ನ ಹೆಸರಿಗೆ ಮಸಿ ಬಳಿಯಲು ವಿರೋಧ ಪಕ್ಷಗಳು ಮುಡಾ ಹಗರಣದಲ್ಲಿ ರಾಜಕೀಯ ಮಾಡುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ ವಿರುದ್ದ ವಾಗ್ದಾಳಿ ನಡೆಸಿದರು.
ವಿಧಾನಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷಗಳು ಸದನದ ಬಾವಿಗಿಳಿದು ಮುಡಾ ಹಗರಣದ ಬಗ್ಗೆ ಚರ್ಚೆಗೆ ಒತ್ತಾಯಿಸಿದವು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯದ್ದೇ ಸಮಸ್ಯೆ. ಮುಡಾ ವಿಚಾರ ಬಂದಾಗ ಪ್ರತಿಭಟಿಸುತ್ತಾರೆ. ನಿಯಮಾನುಸಾರ ನಿವೇಶನ ಪಡೆಯಲಾಗಿದೆ. ಎಲ್ಲವೂ ಕಾನೂನಿನ ಪ್ರಕಾರವೇ ನಡೆದಿದೆ. ಮುಡಾ ನಿವೇಶನ ಪಡೆದಾಗ ಬಿಜೆಪಿ ಅಧಿಕಾರದಲ್ಲಿತ್ತು. ಪ್ರತಿಪಕ್ಷಗಳನ್ನು ಟೀಕಿಸಿ ಈಗ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದರು.